Please note that Tapas no longer supports Internet Explorer.
We recommend upgrading to the latest Microsoft Edge, Google Chrome, or Firefox.
Home
Comics
Novels
Community
Mature
More
Help Discord Forums Newsfeed Contact Merch Shop
Publish
Home
Comics
Novels
Community
Mature
More
Help Discord Forums Newsfeed Contact Merch Shop
__anonymous__
__anonymous__
0
  • Publish
  • Ink shop
  • Redeem code
  • Settings
  • Log out

ಸನಾತನ ಸಂಸ್ಕೃತಿ

_ಕರೆತಾರೆಲೆ ರಂಗನ ಶ್ರೀಹರಿಯ ಎಂದವರು ಶ್ರೀ ವ್ಯಾಸರಾಯರು

_ಕರೆತಾರೆಲೆ ರಂಗನ ಶ್ರೀಹರಿಯ ಎಂದವರು ಶ್ರೀ ವ್ಯಾಸರಾಯರು

Jun 21, 2025

_ಕರೆತಾರೆಲೆ ರಂಗನ ಶ್ರೀಹರಿಯ ಎಂದವರು ಶ್ರೀ ವ್ಯಾಸರಾಯರು 
#ಏಸೇಸು #ಜನುಮ #ಸೂಸಿ #ಶ್ರೀಹರಿಭಕ್ತರ #ಸಂಗ #ಸುಳಾದಿ #ವೇಣುಗೋಪಾಲ
 
ದಾಸರೆಂದರೆ ಪುರಂದರ ದಾಸರಯ್ಯ! ವಾಸುದೇವ ಕೃಷ್ಣನ್ನ ಸೂಸಿ ಪೂಜಿಸುವಂಥ ||ದಾಸರೆಂದರೆ|| ಗ್ರಾಸಕಿಲ್ಲದೆ ಪೋಗಿ ಪರರ ಮನೆಗಳ ಪೊಕ್ಕು ದಾಸನೆಂದು ತುಳಸೀಮಾಲೆ ಧರಿಸಿ ಬೇಸರಿಲ್ಲದೆ ಅವರ ಕಾಡಿಬೇಡಿ ಬಳಲಿಸುತ ಕಾಸು ಗಳಿಸುವ ಪುರುಷ ಹರಿದಾಸನೇ.

  #||ದಾಸರೆಂದರೆ|| #ದಾಸಸಾಹಿತ್ಯ #ಪ್ರಕಾರ #ವ್ಯಾಸರಾಯ #ಯತಿರಾಜ

ಇವರ ಜನ್ಮಸ್ಥಳ - ಮೈಸೂರು ಜಿಲ್ಲೆಯ ಬನ್ನೂರು. ವ್ಯಾಸರಾಯರ ತಂದೆ ರಾಮಾಚಾರ್ಯರು 
 ತಾಯಿಯ ಹೆಸರು ಸೀತಾಬಾಯಿ. 
ವ್ಯಾಸರಾಯರ ಪೂರ್ವಾಶ್ರಮದ ಹೆಸರು ಯತಿರಾಜ.


ಶ್ರಿಯುತರು ಅಬ್ಬೂರಿನ ಬ್ರಹ್ಮಣ್ಯತೀರ್ಥರಿಂದ ಸನ್ಯಾಸ ದೀಕ್ಷೆ ಸ್ವೀಕರಿಸಿದರೆಂದು ದಾಖಲೆಗಳಿಂದ ತಿಳಿದುಬರುತ್ತದೆ.

 ವ್ಯಾಸರಾಯರು ವಿಜಯ ನಗರ ಸಾಮ್ರಾಜ್ಯಕ್ಕೆ ರಾಜಗುರುಗಳಾಗಿದ್ದರು. 

ಮಠಾಧಿಪತಿಗಳಾಗಿ ಒಂದೆಡೆಗೆ ರಾಜಗುರುಗಳು ಎನ್ನಿಸಿದ್ದರೆ, ಮತ್ತೊಂದೆಡೆ ಧರ್ಮೋಪದೇಶಕರೂ ಆಗಿದ್ದರು. ಸಾಳುವ ನರಸಿಂಹನ ಆಳ್ವಿಕೆಯ ಕಾಲದಿಂದ, ಅಚ್ಚುತರಾಯನ ಆಳ್ವಿಕೆಯವರೆಗೆ, ಸುಮಾರು ಅರವತ್ತು ವರ್ಷಗಳ ಕಾಲ ಸಕಲ ರಾಜಮಹಾರಾಜರಿಂದ ಸನ್ಮಾನಿಸಲ್ಪಟ್ಟಿದ್ದರು.

 ವಿಜಯನಗರದ ಪ್ರಖ್ಯಾತ ದೊರೆಯೆನಿಸಿದ್ದ ಕೃಷ್ಣದೇವರಾಯನು ವ್ಯಾಸರಾಯರನ್ನು ಪರಮ ಗುರುಗಳಾಗಿ ಸ್ವೀಕರಿಸಿದ್ದನೆಂದು ಶಾಸನಗಳಿಂದ ತಿಳಿದುಬಂದಿದೆ.


      ವ್ಯಾಸರಾಯರು ೧೫೪೮ , ಫಾಲ್ಗುಣ ಮಾಸದ ಚತುರ್ಧಿ ದಿನದಂದು, ಹಂಪೆಯಲ್ಲಿ ಕಾಲವಾದರು. ಇವರ ಬೃಂದಾವನವು ಆನೆಗೊಂದಿಯ ಸಮೀಪವಿರುವ ತುಂಗಭದ್ರಾ ದ್ವೀಪದಲ್ಲಿದೆ. ಈ ಸ್ಥಳವನ್ನು ನವ ಬೃಂದಾವನ ಎಂದು ಕರೆಯಲಾಗುತ್ತದೆ. ಇದು ಬಹು ಪ್ರಸಿದ್ಧ ವಾಗಿದೆ.

ಕೃತಿಗಳು:-
ದಾಸಸಾಹಿತ್ಯ ಪರಂಪರೆಯನ್ನು ಶ್ರೀಪಾದರಾಜರ ತರುವಾಯ ಬೆಳೆಸಿದವರೆಂದರೆ ವ್ಯಾಸರಾಯರು. ಈವರೆಗೆ ವ್ಯಾಸರಾಯರು ರಚಿಸಿರುವ ೧೧೯ ಕೀರ್ತನೆಗಳು ಮಾತ್ರ ಲಭ್ಯವಾಗಿವೆ. ಇದರಲ್ಲಿ ಉಗಾಭೋಗಗಳು ಸೇರಿವೆ. 

ಅಂಕಿತ ಪ್ರಧಾನ ಪಧ್ಧತಿ ಇವರಿಂದಲೇ ಪ್ರಾರಂಭವಾಯಿತು. ಶ್ರೀಕೃಷ್ಣ ಎಂಬುದು ವ್ಯಾಸರಾಯರ ಅಂಕಿತ. ಹರಿಸರ್ವೋತ್ತಮ ವಾಯು ಜೀವೋತ್ತಮ ಇವರ ಜನಪ್ರಿಯ ವಾಕ್ಯ 

ಇವರ ಪ್ರಮುಖ ಕಿರ್ತನೆಗಳು:-

 ಚಂದ್ರಿಕಾಚಾರ್ಯರ ಪಾದ ದ್ವಯಕೆ/
 ಎರುಗುವೆ ಪ್ರತಿವಾಸರಕೆ /ಪ/

 ನವ ವೃಂದಾವನ ಮಧ್ಯದಿ ಶೋಭಿಪ
  ನವವಿಧ ವರಗಳ ನೀಡುತ ಸತತ/
 ನವ ಮಣಿ ಮುಕುಟ ಮಸ್ತಕದಿ ಶೋಭಿಪ
  ನವ್ಯ ಜೀವನ ಶುಭಫಲ ಕೋರುತ/
 ನಂಬಿದ ಭಕ್ತರ ದೋಷಗಳೆಣಿಸದೆ ಸುಂದರ ರಘುಪತಿ ರಾಮನ ತೋರಿದ /೧/

 ವಿಜಯ ಮೂರುತಿ ರಾಮನ ಧ್ಯಾನಿಸಿ
  ವಿಜಯ ನಗರ ಸಾಮ್ರಾಜ್ಯ ವಿಸ್ತರಿಸಿ/
 ವಿಜಿಯಿಸಿ ಸ್ಥಾಪಿಸಿ ಮಧ್ವಮತದ ದ್ವಿಗವಿಜಯ ತತ್ವ ತಿರುಳನು ಸಾರಿ
  ಅಕಳಂಕ ಚರಿತ ಶ್ರೀರಾಮ ಚಂದಿರನ ಮಹಿಮೆಯ ಇಳೆಯೊಳು ಸಾಧಿಸಿ ತೋರಿದ /೨/

 ಯಾಂತ್ರಿಕ ತನದಿ ತಾಪವೆನಿಸುವ
  ಯಂತ್ರೋಧಾರಕ ಮೂರ್ತಿಯ ನಿಲ್ಲಿಸಿ/
 ಮಂತ್ರಾಕ್ಷತೆಯ ಮಹಿಮೆಯ ತೋರಿದ ಚಿತ್ತದಲಿಟ್ಟು ಚಂದ್ರಿಕಾ ರಚಿಸಿ/
 ಪಂಚಮುಖದ ಪ್ರಾಣೇಶ ವಿಠ್ಠಲ ಪಂಚಮಂತ್ರದಿಂದ ಪೂಜಿಸಿ ಯತಿಸಿದ /೩/

ಚಿತ್ತೈಸಿದ ವ್ಯಾಸರಾಯ

ರಾಗ ಭೈರವಿ. ಅಟ ತಾಳ ಚಿತ್ತೈಸಿದ ವ್ಯಾಸರಾಯ ಚಿತ್ತಜನಯ್ಯನ ಸಭೆಗೆ ||ಪ|| ನಿತ್ಯ ಮುತ್ತೈದೆಯರೆಲ್ಲ ಎತ್ತೆ ರತುನದಾರತಿಯ ||ಅ.ಪ|| ಹೇಮ ಮಯವಾದ ದಿವ್ಯ ವ್ಯೋಮಯಾನವನ್ನೆ ಏರಿ ಸ್ವಾಮಿ ವ್ಯಾಸರಾಯ ಪೊರಟ ಪ್ರೇಮದಿ ಹರಿಪುರಕೆ ಹಾಟಕದ ಬೆತ್ತಕೋಟಿ ಸಾಟಿ ಇಲ್ಲದೆ ಪಿಡಿದು ನೀಟಾದ ಓಲಗದವರ ಕೂಟಗಳ ಮಧ್ಯದಲ್ಲಿ ಸಾಧು ವಿಪ್ರ ಜನರೆಲ್ಲ ವೇದ ಘೋಷಣೆಯ ಮಾಡೆ ನಾದವುಳ್ಳ ನಗಾರಿಯು ಭೇದಿಸಿತು ನಾಲ್ಕು ದಿಕ್ಕು ಹೇಮಮಯ ಪಿಡಿಯುಳ್ಳ ಚಾಮರಂಗಳನ್ನೆ ಪಿಡಿದು ಕಾಮಿನಿಮಣಿಯರ್ಕೆಲದಿ ಸ್ವಾಮಿಯೆಂದು ಬೀಸುತ್ತಿರೆ ಅರವಿಂದಾಸನನಯ್ಯ ಪುರಂದರವಿಠಲನು ಸಿರಿ ಸಹಿತದಿ ಬಂದು ಕರ ಪಿಡಿದೆತ್ತಿದ್ದು ಕಂಡೆ.


ಉಗಾಭೋಗಗಳು

    ೧
ಜಾರತ್ವದಲಿ ಮಾಡಿದ ಪಾಪಗಳಿಗೆಲ್ಲ
ಗೋಪೀಜನಜಾರನೆಂದರೆ ಸಾಲದೇ

ಚೋರತ್ವದಲಿ ಮಾಡಿದ ಪಾಪಗಳಿಗೆಲ್ಲ
ನವನೀತ ಚೋರನೆಂದರೆ ಸಾಲದೇ
ಕ್ರೂರತ್ವವನು ಮಾಡಿದ ಪಾಪಗಳಿಗೆಲ್ಲ
ಮಾವನ ಕೊಂದವನೆಂದರೆ ಸಾಲದೇ

ಪ್ರತಿ ದಿವಸ ಮಾಡಿದ ಪಾಪಗಳಿಗೆಲ್ಲ
ಪತಿತಪಾವನನೆಂದರೆ ಸಾಲದೇ
ಇಂತಿಪ್ಪ ಮಹಿಮೆಯೊಳೊಂದನಾದರೂ ಒಮ್ಮೆ
ಸಂತತ ನೆನೆವರ ಸಲಹುವ ಸಿರಿಕೃಷ್ಣ


    ೨
ನಿನ್ನ ಎಂಜಲನುಟ್ಟು ನಿನ್ನ ಬೆಳ್ಳುಡೆಯುಟ್ಟು
ಮುನ್ನ ಮಾಡಿದ ಕರ್ಮ ಬೆನ್ನ ಬಿಡದಿದ್ದರೆ

ನಿನ್ನ ಓಲೈಸಲೇಕೋ ಕೃಷ್ಣ
ಸಂಚಿತವನುಂಡು ಪ್ರಪಂಚದೊಳಗೆ ಬಿದ್ದು
ನಿನ್ನ ಓಲೈಸಲೇಕೋ ಕೃಷ್ಣ
ದಿನಕರನುದಿಸಿ ಕತ್ತಲು ಪೋಗದಿದ್ದರೆ
ಹಗಲೇನೋ ಇರುಳೇನೂ ಕುರುಡಗೆ ಸಿರಿಕೃಷ್ಣ

#Asia #india #America #europ #russia #sea #nation #war #hungry #temperature #isro #stock #crypto #currency #airport #ಪ no #agreement #Chethana #africa #Muniswamy #gowda #Riya #YOGI #AI forien #world #development #Australia


https://youtu.be/FxlyFPWDecE?si=wzpOe03jZCYOqcxo

.
custom banner
pressmailtoday
Chethana Muniswamygo

Creator

_ಕರೆತಾರೆಲೆ ರಂಗನ ಶ್ರೀಹರಿಯ ಎಂದವರು ಶ್ರೀ ವ್ಯಾಸರಾಯರು

Comments (0)

See all
Add a comment

Recommendation for you

  • Invisible Bonds

    Recommendation

    Invisible Bonds

    LGBTQ+ 2.5k likes

  • What Makes a Monster

    Recommendation

    What Makes a Monster

    BL 77.2k likes

  • Secunda

    Recommendation

    Secunda

    Romance Fantasy 43.5k likes

  • Blood Moon

    Recommendation

    Blood Moon

    BL 47.9k likes

  • For the Light

    Recommendation

    For the Light

    GL 19.1k likes

  • Invisible Boy

    Recommendation

    Invisible Boy

    LGBTQ+ 11.6k likes

  • feeling lucky

    Feeling lucky

    Random series you may like

ಸನಾತನ ಸಂಸ್ಕೃತಿ
ಸನಾತನ ಸಂಸ್ಕೃತಿ

808 views0 subscribers

*ಬ್ರಹ್ಮನು ಸೃಷ್ಟಿಯ ದೇವರ ಮತ್ತು ತ್ರಿಮೂರ್ತಿಗಳಲ್ಲಿ ಒಬ್ಬ*

ಬ್ರಹ್ಮ ನು ಸೃಷ್ಟಿಯ ದೇವರು (ದೇವ) ಮತ್ತು ತ್ರಿಮೂರ್ತಿಗಳಲ್ಲಿ ಒಬ್ಬ, ಉಳಿದವರು ವಿಷ್ಣು ಮತ್ತು ಶಿವ ದೇವರು.

ವೇದಾಂತ, ಪುರಾಣ , ತತ್ತ್ವಶಾಸ್ತ್ರದಲ್ಲಿ ಬ್ರಹ್ಮನ್ ಎಂದು ಕರೆಯಲ್ಪಡುವ ಪರಮಾತ್ಮನು ಅವನ ಪತ್ನಿ ಸರಸ್ವತಿ, ಈಕೆ ಕಲಿಕೆಯ ದೇವತೆ. ಬ್ರಹ್ಮನನ್ನು ಹೆಚ್ಚಾಗಿ ವೈದಿಕ ದೇವತೆಯಾದ ಪ್ರಜಾಪತಿಯೊಂದಿಗೆ ಹೆಚ್ಚಿನ ಸಂಬಂಧ ಹೊಂದಿದ್ದಾನೆ..
#bramma #brammanandam #saraswatichandra #saraswati #sharadmalhotra #sharada #hinduism #jainstatus #jainsong

ಸೃಷ್ಟಿಯ ಪ್ರಕ್ರಿಯೆಯ ಆರಂಭದಲ್ಲಿ, ಬ್ರಹ್ಮನು ಹನ್ನೊಂದು ಸೃಷ್ಟಿಸಿದ ಪ್ರಜಾಪತಿಗಳನ್ನು ಮಾನವ ಜನಾಂಗದ ಪಿತಾಮಹರು ಎಂದು ನಂಬಲಾಗಿದೆ. ಬ್ರಹ್ಮನು ಬ್ರಹ್ಮಾಂಡದ ಸೃಷ್ಟಿಕರ್ತ ಎಂದು ಕರೆಯಲಾಗುತ್ತದೆ.

ಈತ ತ್ರಿಮೂರ್ತಿಗಳ ಮೂಲಭೂತ ಸದಸ್ಯ, ಇದರಲ್ಲಿ ವಿಷ್ಣು, ಸಂರಕ್ಷಕ ಮತ್ತು ಶಿವ, ವಿನಾಶಕ ಕೂಡ ಸೇರಿದ್ದಾರೆ. ಒಟ್ಟಾಗಿ, ಈ ಮೂರು ದೇವತೆಗಳು ಕ್ರಮವಾಗಿ ಸೃಷ್ಟಿ, ಸಂರಕ್ಷಣೆ ಮತ್ತು ವಿನಾಶದ ಕಾರ್ಯಗಳನ್ನು ಪ್ರತಿನಿಧಿಸುತ್ತವೆ,.

ಸೃಷ್ಟಿಕರ್ತನಾಗಿ ಬ್ರಹ್ಮನ ಪಾತ್ರವು ಭವ್ಯ ಯೋಜನೆಯಲ್ಲಿ ಅವನ ಮಹತ್ವವನ್ನು ಒತ್ತಿಹೇಳುತ್ತದೆ.
ಬ್ರಹ್ಮನ ದೈವಿಕ ವಾಹನ ಅಥವಾ ವಾಹನವು ಹಂಸ ಎಂದು ಕರೆಯಲ್ಪಡುವ ಪವಿತ್ರ ಹೆಬ್ಬಾತು. ದೇವರುಗಳು ಮತ್ತು ಮನುಷ್ಯರಿಗೆ ಮಾತ್ರವಲ್ಲದೆ ಅಸುರರು ಎಂದು ಕರೆಯಲ್ಪಡುವ ರಾಕ್ಷಸರಂತಹ ಜೀವಿಗಳಿಗೂ ಹಲವಾರು ಆಶೀರ್ವಾದಗಳನ್ನು ನೀಡುವ ಅಸಾಧಾರಣ ಸಾಮರ್ಥ್ಯವನ್ನು ಅವನು ಹೊಂದಿದ್ದಾನೆ. ಕುತೂಹಲಕಾರಿಯಾಗಿ, ರಾಕ್ಷಸರು ಸಹ ಅವನ ದೈವಿಕ ದೇಹದ ವಿವಿಧ ಭಾಗಗಳಿಂದ ಹುಟ್ಟಿಕೊಂಡಿದ್ದಾರೆ ಎಂದು ಹೇಳಲಾಗುತ್ತದೆ. ವಿವರಿಸಲು, ರಾಕ್ಷಸ ಜನಾಂಗವನ್ನು ಬ್ರಹ್ಮನ ಪಾದದಿಂದಲೇ ಅಸ್ತಿತ್ವಕ್ಕೆ ತರಲಾಗಿದೆ ಎಂದು ನಂಬಲಾಗಿದೆ.

ಮನುಸ್ಮೃತಿ ಗ್ರಂಥವು ಇವರನ್ನು ಮರಿಚಿ, ಅತ್ರಿ, ಅಂಗಿರಸ, ಪುಲಸ್ತ್ಯ, ಪುಲಹ, ಕ್ರತುಜ, ವಶಿಷ್ಠ, ಪ್ರಸೇತರು ಅಥವಾ ದಕ್ಷ, ಭೃಗು ಮತ್ತು ನಾರದರ ಜನಿಕರು ಎಂದು ಪಟ್ಟಿ ಮಾಡುತ್ತದೆ. ಬ್ರಹ್ಮಾಂಡವನ್ನು ಸೃಷ್ಟಿಸಲು ಅವನಿಗೆ ಸಹಾಯ ಮಾಡಲು ಅವನು ಏಳು ಮಹಾನ್ ಋಷಿಗಳನ್ನು ಅಥವಾ ಸಪ್ತಋಷಿಗಳನ್ನು ಸೃಷ್ಟಿಸಿದನು , ಅವನ ಈ ಎಲ್ಲಾ ಪುತ್ರರು ಬ್ರಹ್ಮನ ದೇಹದಿಂದಲ್ಲ, ಅವನ ಮನಸ್ಸಿನಿಂದ ಜನಿಸಿದ ಕಾರಣ, ಅವರನ್ನು ಮಾನಸ ಪುತ್ರರು ಎಂದು ಕರೆಯಲಾಗುತ್ತದೆ.

ಪುರಾಣಗಳ ಪ್ರಕಾರ, ಬ್ರಹ್ಮನು ಬ್ರಹ್ಮಾಂಡದ ಆರಂಭದಲ್ಲಿ ವಿಷ್ಣುವಿನ ನಾಭಿಯಿಂದ ಬೆಳೆದ ಕಮಲದ ಹೂವಿನಲ್ಲಿ (ತಾಯಿಯಿಲ್ಲದೆ) ಸ್ವಯಂ-ಜನನ ಮಾಡಿದ್ದಾನೆ. ಇದು ಅವನ ಹೆಸರನ್ನು ನಭಿಜ (ನಾಭಿಯಿಂದ ಜನಿಸಿದ) ಎಂದು ವಿವರಿಸುತ್ತದೆ. ನೀರಿನಲ್ಲಿ ಜನಿಸಿದ ಬ್ರಹ್ಮನನ್ನು ಕಂಜ (ನೀರಿನಲ್ಲಿ ಜನಿಸಿದ) ಎಂದೂ ಕರೆಯುತ್ತಾರೆ.

Subscribe

34 episodes

_ಕರೆತಾರೆಲೆ ರಂಗನ ಶ್ರೀಹರಿಯ  ಎಂದವರು ಶ್ರೀ ವ್ಯಾಸರಾಯರು

_ಕರೆತಾರೆಲೆ ರಂಗನ ಶ್ರೀಹರಿಯ ಎಂದವರು ಶ್ರೀ ವ್ಯಾಸರಾಯರು

28 views 0 likes 0 comments


Style
More
Like
List
Comment

Prev
Next

Full
Exit
0
0
Prev
Next